ಭಿನ್ನ ಸಾಮಥ್ಯ ೯ದ ಮಕ್ಕಳ ಅಂತರ್ ಜಿಲ್ಲಾ ಮಟ್ಟದ ಕಲೋತ್ಸವ -2023
ಮೂಡುಬಿದಿರೆಯ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಗೆ ನೃತ್ಯದಲ್ಲಿ ಪ್ರಥಮ ಸ್ಥಾನ
ಮೂಡುಬಿದಿರೆ: ವಾಮಂಜೂರಿನ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ದಿ.ಮಾತೃಶ್ರೀ ರತ್ನಮ್ಮ ಹೆಗ್ಗಡೆ ಯವರ ಸ್ಮರಣಾರ್ಥ ಬುಧವಾರ ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ನಡೆದ ಅಂತರ್ ಜಿಲ್ಲಾ ಮಟ್ಟದ ಕಲೋತ್ಸವ-2023'ದಲ್ಲಿ ಮುಡುಬಿದಿರೆಯ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಶಾಲೆಯ ಮಕ್ಕಳು ಭಾಗವಹಿಸಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಶ್ರಮಿಸಿದ ಎಲ್ಲಾ ಶಿಕ್ಷಕ ವೃಂದವರಿಗೆ ಶಾಲಾ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ.
0 Comments