ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ

ಜಾಹೀರಾತು/Advertisment
ಜಾಹೀರಾತು/Advertisment

 ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ



ಮೂಡುಬಿದಿರೆ: ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ದ.ಕ, ಉಡುಪಿ ಜಿಲ್ಲಾ ಸಮಿತಿಯ  ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 'ಸಮುದ್ರ ತೀರದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ'ದಡಿಯಲ್ಲಿ ಸಸಿಹಿತ್ಲು ಸಮುದ್ರ ತೀರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.


  ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕಾಧ್ಯಕ್ಷ ತೋನ್ಸೆ ಜಯ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.


 ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಪ್ರಕಾಶ್ ಶೆಟ್ಟಿ ಮಾತನಾಡಿ ಜಿಲ್ಲೆಯ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.


 ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿ ತುಳುನಾಡಿದ ನೆಲ,ಜಲವನ್ನು ನಾವು ಸಂರಕ್ಷಿಸಬೇಕು. ಇಲ್ಲಿ ಉದ್ಯೋಗಗಳು ಸೃಷ್ಠಿಯಾಗಬೇಕು. ಸಮುದಾಯಕ್ಕೆ ಬೇರೆ ಬೇರೆ ರೀತಿಯ ಸಾಂಪ್ರದಾಯಿಕ ಬದುಕಿನೊಂದಿಗೆ ಮೂಲಭೂತ ಸೌಕರ್ಯಗಳು ಸಿಗಬೇಕು ಹಾಗೂ ಜಿಲ್ಲೆಯ ಅಸ್ಮಿತೆ ಉಳಿಯಬೇಕು.ಸಾಂಪ್ರದಾಯಿಕ ಕುಲಕಸುಬುಗಳನ್ನು ಉಳಿಸಿಕೊಂಡು ಪರಿಸರವನ್ನು ಸಂರಕ್ಷಿಸಬೇಕು. ದೇಶದ ಪ್ರಧಾನಿ ಮೋದಿಯವರ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಮಿತಿಯು ಕೈಜೋಡಿಸಿ ಸಮಾನ ಮನಸ್ಕರೊಂದಿಗೆ ಕಡಲ ತಡಿಯಿಂದಲೇ ಕಾರ್ಯವನ್ನು ಆರಂಭಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತಾ ಕಾರ್ಯವನ್ನು ಮಾಡಲಾಗುವುದು ಈ ಮೂಲಕ ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗುವುದು ಎಂದರು.


  ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ ಮಾತನಾಡಿ ಸ್ವಚ್ಛತಾ ಅಭಿಯಾನವನ್ನು ಕರಾವಳಿ ಭಾಗದಲ್ಲಿ ನಿತ್ಯ ನಿರಂತರವಾಗಿ ಈ ಮಾಡಲಾಗುವುದು.ಕಡಲ ತಡಿಯಲ್ಲಿ ಸ್ವಚ್ಛತೆ ಇಡುವುದರಿಂದ ವಿದೇಶಿಯರು ಪ್ರವಾಸಿತಾಣಗಳಿಗೆ ಬರುವ ಸಂಖ್ಯೆ ಹೆಚ್ಚಾಗುತ್ತದೆ. ಆಗ ಪ್ರವಾಸಿ ಕೇಂದ್ರಗಳು ಅಭಿವೃದ್ಧಿ ಹೊಂದುತ್ತವೆ. ಸಸಿಹಿತ್ಲು ಪರಿಸರದ ಜನರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಹಾಗೂ ಕಡಲ ತೀರದಲ್ಲಿ ಶಾಶ್ವತ ತಡೆಗೋಡೆಗಳ ನಿರ್ಮಾಣವಾಗಬೇಕಾಗಿದೆ ಎಂದರು.


ಸಸಿಹಿತ್ಲು ಯುವಕ ಮಂಡಲದ ಅಧ್ಯಕ್ಷ ದಿಲೀಪ್ ಕರ್ಕೇರಾ ಮಾತನಾಡಿ ಕಡಲತೀರವನ್ನು ಸ್ವಚ್ಛ ಮಾಡುವುದರೊಂದಿಗೆ ಈ ನಾಡಿನ ನೆಲ,ಜಲದ ಬಗ್ಗೆ ನಮಗೆ ಅರಿವು ಇರಬೇಕು. ದೃಶ ಮತ್ತು ಪರಿಸರದ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಬೇಕೆಂದರು.

    ಹಳೆಯಂಗಡಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ, ಸದಸ್ಯೆ ಮಲ್ಲಿಕಾ, ಮೂಡುಬಿದಿರೆ ಜವನೆರ್ ಬೆದ್ರ ಸಂಘಟನೆಯ ಸ್ಥಾಪಕಾಧ್ಯಕ್ಷ, ಸಮಿತಿಯ ನೂತನ ಸ್ವಚ್ಛತಾ ರಾಯಭಾರಿ ಅಮರ್ ಕೋಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ತಿಂಗಳಾಯ, ಸಸಿಹಿತ್ಲು ಯುವತಿ ಮಂಡಲದ ಅಧ್ಯಕ್ಷೆ ಬಬಿತಾ ಮೋಹನ್, ಕಾರ್ಯದರ್ಶಿ ಅಮಿತಾ ಮಹೇಶ್, ಉಪಾಧ್ಯಕ್ಷೆ ಶಶಿಕಲಾ ಸತೀಶ್, ನವೋದಯ ಮಹಿಳಾ ಮಂಡಳಿಯ ಅಧ್ಯಕ್ಷೆ ಬಿ.ಕೋಟ್ಯಾನ್, ಯುವಕ ಮಂಡಲದ ಕಾರ್ಯದರ್ಶಿ ಯಶ್ವಿತ್ ಸಾಲ್ಯಾನ್ ಸಹಿತ ಸಸಿಹಿತ್ಲು ಪರಿಸರದ ನಿವಾಸಿಗಳು ಸಮುದ್ರ ತೀರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.


  ಗ್ರಾಮ ಪಂಚಾಯತ್ ಹಳೆಯಂಗಡಿ, ಸಸಿಹಿತ್ಲು ಹಳೆ ವಿದ್ಯಾರ್ಥಿ ಸಂಘ(ರಿ), ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ಸಸಿಹಿತ್ಲು ಯುವಕ, ಯುವತಿ ಮಂಡಲ, ನವೋದಯ ಮಹಿಳಾ ಮಂಡಳಿ ಸಸಿಹಿತ್ಲು, ನೆಹರು ಯುವ ಕೇಂದ್ರ ಮಂಗಳೂರು ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯು ಸ್ವಚ್ಛತಾ ಅಭಿಯಾನಕ್ಕೆ ಸಹಯೋಗ ನೀಡಿತ್ತು.

Post a Comment

0 Comments