ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಕಟ್ಟ ನಿರ್ಮಾಣ
ಮೂಡುಬಿದಿರೆ: ಶ್ರೀ ಮಹಾವೀರ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಜೊತೆ ಸೇರಿ ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಕ್ಕೇರಿ ಗುಂಡೂರಿ ರಸ್ತೆ ಸೇತುವೆ ಅಡಿಯಲ್ಲಿ ನದಿಗೆ ಅಡ್ಡಲಾಗಿ ಬೃಹತ್ ಕಟ್ಟ ಕಟ್ಟುವ ಕಾರ್ಯವನ್ನು ಕೈಗೊಂಡರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ಎನ್.ಎಸ್.ಎಸ್ ಯೋಜನಾಧಿಕಾರಿ ಶಾರದಾ, ಉಪನ್ಯಾಸಕರಾದ ಪ್ರಶಾಂತ್, ರಶ್ಮಿತಾ, ಪೂರ್ಣಿಮಾ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರಕುಮಾರ್ ಅವರು ಇದರ ನೇತೃತ್ವವನ್ನು ವಹಿಸಿದ್ದರು.
0 Comments