ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಅರ್ಜುನಾಪುರಕ್ಕೆ ರೂ 2.50 ಲಕ್ಷದ ಚೆಕ್ ಹಸ್ತಾಂತರ
ಮೂಡುಬಿದಿರೆ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕು ವತಿಯಿಂದ ಶಿರ್ತಾಡಿಯ ಅರ್ಜುನಾಪುರ ಮಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕಳೆದ ಮೇ ತಿಂಗಳಲ್ಲಿ ರೂ 5,00000 ಕೊಟ್ಟಿದ್ದು ಇದೀಗ ಈ ಬಾರಿ ರೂ 2.50 ಲಕ್ಷ ಮೊತ್ತದ ಡಿಡಿ ಯನ್ನು ತಾಲೂಕು ಯೋಜನಾಧಿಕಾರಿ ಸುನಿತಾ ಅವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ , ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಶಿರ್ತಾಡಿ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
0 Comments