ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡುಬಿದಿರೆ ಮತ್ತು ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ
ಇವುಗಳ ಜಂಟಿ ಆಶ್ರಯದಲ್ಲಿ
ಜ.13 ಶನಿವಾರದಂದು ಬೆಳಿಗ್ಗೆ 10-00 ಕ್ಕೆ ಸರಿಯಾಗಿ ಮೂಡುಬಿದ್ರಿ ಕೋ ಆಪರೇಟಿವ್ ಸೊಸೈಟಿಯ ಕಲ್ಪವೃಕ್ಷ ಸಭಾ ಭವನದಲ್ಲಿ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗ್ರತಿ ಕಾರ್ಯಕ್ರಮ ನಡೆಯಲಿದೆ.
ಅತ್ತಾವರ ಕೆ. ಎಂ. ಸಿ. ಆಸ್ಪತ್ರೆಯ ತಜ್ಞ ವೈದ್ಯರ ನೇತೃತ್ವದಲ್ಲಿ ನಡೆಯುವ ಈ ಜಾಗೃತಿ ಕಾರ್ಯಕ್ರದಲ್ಲಿ ಮೂಡುಬಿದಿರೆಯ ನುರಿತ ತಜ್ಞ ವೈದ್ಯರು (general medicine ), ಸ್ತ್ರೀ ರೋಗ ತಜ್ಞರು ಭಾಗವಹಿಸಲಿರುವರು.
ನಂತರ 5 ಮಂದಿ ನಾಟಿ ವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ P P T ಮೂಲಕ ಮಾಹಿತಿಯನ್ನು ಪಡೆದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಗುಣಪಾಲ ಮುದ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
0 Comments