ನಾರಾವಿ 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ಜಾಹೀರಾತು/Advertisment
ಜಾಹೀರಾತು/Advertisment

 ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ಮೂಡುಬಿದಿರೆ:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಭ|1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮಾ.22ರಿಂದ 24ರವರೆಗೆ ನಡೆಯಲಿದ್ದು  ಆ   ಪ್ರಯುಕ್ತ ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. 

 ಸ್ಪರ್ಧೆಗಳ ವಿವರ ಮತ್ತು ನಿಯಮಗಳು ಈ ಕೆಳಗಿನಂತಿದೆ.


1. ಧರ್ಮನಾಥ ಜಿನ ಸಂಗೀತ ಸ್ಪರ್ಧೆ


ಪ್ರಥಮ ಬಹುಮಾನ : 10.000 ನಗದು ಮತ್ತು ಸ್ಮರಣಿಕೆ


ದ್ವಿತೀಯ ಬಹುಮಾನ: 8,000 ನಗದು ಮತ್ತು ಸ್ಮರಣಿಕೆ


ನಿಯಮಗಳು:


ಧರ್ಮನಾಥ ಸ್ವಾಮಿಯ ಹಾಡು / ಭಜನೆಯನ್ನು ಒಬ್ಬರೇ ಹಾಡಿ, ವಿಡಿಯೋ ಮಾಡಿ ಕಳುಹಿಸಬೇಕು.



+ ಸಾಹಿತ್ಯ, ಸ್ವರ, ಹಿನ್ನಲೆ ಸಂಗೀತ, ಛಾಯಾಗ್ರಹಣ ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು,


+ ನೀವು ಕಳುಹಿಸಿದ ಹಾಡು / ಭಜನೆ ಮತ್ತು ಅದರ ವಿಡಿಯೋ ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು.


+ ವಿಡಿಯೋದ ಸಮಯ ಕನಿಷ್ಠ 5 ನಿಮಿಷ, ಗರಿಷ್ಠ 8 ನಿಮಿಷಗಳಾಗಿರಬೇಕು.


2. ಪ್ರಬಂಧ ಸ್ಪರ್ಧೆ


ಪ್ರಥಮ ಬಹುಮಾನ: 3,000 ನಗದು ಮತ್ತು ಸ್ಮರಣಿಕೆ


ದ್ವಿತೀಯ ಬಹುಮಾನ: 2,000 ನಗದು ಮತ್ತು ಸ್ಮರಣಿಕೆ


ನಿಯಮಗಳು:


+ ಪ್ರಬಂಧದ ವಿಷಯ: "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ"


+ ಪ್ರಬಂಧವು 900 ಶಬ್ದಗಳನ್ನು ಮೀರಿರಬಾರದು.


← ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ PDF ಮಾಡಿ ಕಳುಹಿಸತಕ್ಕದು.


ವಿಶೇಷ ಸೂಚನೆ:


1. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ 05 ಮಾರ್ಚ್ 2024,


2. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.


3. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೋ, ವಿಳಾಸ ಮತ್ತು ಮೊಬೈಲ್ ನಂಬರ್‌ಗಳನ್ನು ಜೊತೆಗೆ ಕಳುಹಿಸಬೇಕು.


ವಿಡಿಯೋ ಮತ್ತು ಪ್ರಬಂಧಗಳನ್ನು naravibasadi24@gmail.com ಗೆ ಮೇಲ್ ಮಾಡಬಹುದು ಅಥವಾ 9481016887 ವಾಟ್ಸಪ್ ನಂಬರ್‌ಗೆ ಕಳುಹಿಸಬೇಕಾಗಿ ವಿನಂತಿ.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:


ಶ್ರೀ ಅತುಲ್ 3-9481016887


ಶ್ರೀ ಜ್ಞಾನೇಂದ್ರ ಕುಮಾರ್ ಜೈನ್ - 9902799196

Post a Comment

0 Comments