ಸ್ಪೆಷಲ್ ಒಲಂಪಿಕ್ಸ್ ಗೆ ಮೂಡುಬಿದಿರೆಯ ಅರಮನೆ ಬಾಗಿಲಿನಲ್ಲಿರುವ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಯ ರಂಜಿತ್ ಪ್ರಸಾದ್ ಆಯ್ಕೆ
ಮೂಡುಬಿದಿರೆ: ಸ್ಪೆಷಲ್ ಒಲಂಪಿಕ್ಸ್ ಭಾರತ್ ಕರ್ನಾಟಕ ವತಿಯಿಂದ ದಿನಾಂಕ ಫೆಬ್ರವರಿ 3ಮತ್ತು 4 ರಂದು ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ವಾಲಿಬಾಲ್ ಕ್ರೀಡೆಯಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಫೆಬ್ರವರಿ 14 ರಿಂದ 18 ರವರೆಗೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡಾ ಶಿಬಿರದಲ್ಲಿ ಭಾಗವಹಿಸಲು ತೆರಳುತ್ತಿರುವ ಮೂಡುಬಿದಿರೆಯ ಅರಮನೆ ಬಾಗಿಲಿನಲ್ಲಿರುವ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದ ವಿದ್ಯಾರ್ಥಿ ರಂಜಿತ್ ಪ್ರಸಾದ್.
0 Comments