ಅಯೋಧ್ಯೆಯಲ್ಲಿ ಪಲ್ಲಕಿ ಸೇವೆಗೈದ ಮೂಡುವೇಣುಪುರದೊಡೆಯನ ಸೇವಕರು.

ಜಾಹೀರಾತು/Advertisment
ಜಾಹೀರಾತು/Advertisment

 ಅಯೋಧ್ಯೆಯಲ್ಲಿ ಪಲ್ಲಕಿ ಸೇವೆಗೈದ  ಮೂಡುವೇಣುಪುರದೊಡೆಯನ ಸೇವಕರು.     

ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ  ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ  ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ  ಸೇವೆಯಲ್ಲಿ ಪಾಲ್ಗೊಂಡರು.  ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು ಪೇಜಾವರ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆದುಕೊಂಡರು.

Post a Comment

0 Comments