ತುಳುನಾಡಿನ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೃಜೇಶ್ ಚೌಟ

 ತುಳುನಾಡಿನ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೃಜೇಶ್ ಚೌಟ

ಮೂಡುಬಿದಿರೆ: ದ.ಕ.ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾಪ್ಟನ್ ಬೃಜೇಶ್ ಚೌಟ ಅವರು  ತುಳುನಾಡಿನ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ನಂತರ "ಮಾತೆರೆಗ್ಲಾ ಸೊಲ್ಮೆಲು" ಎಂದು ತುಳು ಭಾಷೆಯಲ್ಲೇ ಕೃತಜ್ಞತೆ ಸಲ್ಲಿಸಿದರು.


  ಕ್ಯಾಪ್ಟನ್ ಬೃಜೇಶ್ ಚೌಟ ಎಂಬ ಹೆಸರಿನವನಾದ ನಾನು ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ  ಭಾರತದ ಸಂವಿಂಧಾನದಕ್ಕೆ ಸತ್ಯ ಶ್ರದ್ಧೆಯನ್ನು ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು ಭಾರತದ ಸಾರ್ವ ಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುತ್ತೇನೆಂದು ತುಳುನಾಡಿನ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಮಾತೆರೆಗ್ಲಾ ಸೊಲ್ಮೆಲು ಎಂದರು ..



Post a Comment

0 Comments

Advertisement