ಮೂಡುಬಿದಿರೆ ಯುವವಾಹಿನಿ ಘಟಕದಿಂದ ಶಾಲೆಗೆ ಕಂಪ್ಯೂಟರ್ ಟೇಬಲ್ ಕೊಡುಗೆ
ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಇಲ್ಲಿನ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್* ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘದ ಸದಸ್ಯ ಲಕ್ಷ್ಮಣ್ ಪೂಜಾರಿ ಉಪಸ್ಥಿತರಿದ್ದರು.
0 Comments