ಸಿ.ಎ.: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಜಾಹೀರಾತು/Advertisment
ಜಾಹೀರಾತು/Advertisment

 ಸಿ.ಎ.: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ 

* 38 ವಿದ್ಯಾಥಿಗಳು ಉತ್ತೀರ್ಣ

*  * ಒಲ್ವಿಟಾ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್


ಮೂಡುಬಿದಿರೆ: ಮೇಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ 25 ಮಂದಿ ವಿದ್ಯರ‍್ಥಿ, ಜನವರಿಯಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ 13 ಮಂದಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯರ‍್ಥಿಗಳು ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ. ಒಲ್ವಿಟಾ ಡಿಸೋಜ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಮೇ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಸಂಸ್ಥೆಯ ಹಿರಿಯ ವಿದ್ಯರ‍್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಎಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. , ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ ಉತ್ತರ‍್ಣರಾಗಿದ್ದಾರೆ.

ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಕ್ಲರ‍್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ರ‍್ಶನ್ ಜಿ ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟಿçÃತ್ ಸಿ.ಜಿ, ಅವಿನಾಶ್, ಸುಕ್ಷಾö್ಮ, ಅಭಿಷೇಕ್ ಚೋಟಿ ಸೇರಿದಂತೆ 13 ವಿದ್ಯರ‍್ಥಿಗಳು ಉತ್ತರ‍್ಣರಾಗಿದ್ದಾರೆ. ಎಲ್ಲಾ ವಿದ್ಯರ‍್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಉಚಿತ ಶಿಕ್ಷಣವನ್ನು ಪಡೆದವರಾಗಿದ್ದಾರೆ. ಇವರಲ್ಲಿ 10 ವಿದ್ಯರ‍್ಥಿಗಳು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳನ್ನು ಪ್ರಥಮ ಪ್ರಯತ್ನದಲ್ಲೆ ಉತ್ತರ‍್ಣರಾಗಿ ಈ ಸಾಧನೆ ಮೆರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

---

ಕಿನ್ನಿಗೋಳಿ ಮೂಲದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜ, ಆಳ್ವಾಸ್‌ನಲ್ಲೇ ಪದವಿಪರ‍್ವ ಹಾಗೂ ಪದವಿ ಶಿಕ್ಷಣವನ್ನು ಸಂಸ್ಥೆಯ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡಿದ್ದಾರೆ. 2019ರ ಸಾಲಿನ ಪದವಿಪರ‍್ವ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಈಕೆ ನಂತರ ಪದವಿ ಶಿಕ್ಷಣದ ಜೊತೆಗೆ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 19ನೇ ರ‍್ಯಾಂಕ್ ಗಳಿಸಿದ್ದರು. ಇದೀಗ ಮೇ 2024 ರಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ‍್ಯಾಂಕ್ ಗಳಿಸಿ ತೇರ್ಗಡೆ ಹೊಂದಿದ್ದಾರೆ. 

ಈಕೆ ಒಲಿವರ್ ಉಬಾಲ್ಡ್ ಡಿಸೋಜ -ಅನಿತಾ ಮರಿಯಾ ಡಿಸೋಜ ದಂಪತಿಗಳ ಪುತ್ರಿ. ತಮ್ಮ ರ‍್ಟಿಕಲ್‌ಶಿಫ್‌ನ್ನು ಮಂಗಳೂರಿನ ಸಿ.ಎ.ನಿತಿನ್ ಜೆ ಶೆಟ್ಟಿಯವರ  ಮಾರ್ಗದರ್ಶನದಲ್ಲಿ  ಪೂರೈಸಿದರು.

Post a Comment

0 Comments