*ಆಸ್ಪತ್ರೆ ಒಳ ನುಗ್ಗಿದ ಬಸ್ಸು!!ಕರಾವಳಿಯ ಪ್ರಯಾಣಿಕರ ಮೆಚ್ಚುಗೆ ಗಳಿಸಿದ ಶ್ರಮಿಕರು*
13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ ಎದೆ ನೋವೆಂದು ಹಾರ್ಟ್ ಅಟ್ಯಾಕ್ ನ ಸೂಚನೆ ನೀಡುತ್ತಿದ್ದಂತೆ ಎಚೆತ್ತು ಗೊಂಡ ಬಸ್ಸಿನ ಚಾಲಕ ನಿರ್ವಾಹಕರಾದ ಗಜೇಂದ್ರ ಕುಂದರ್ ಹಾಗು ಮಹೇಶ್ ಪೂಜಾರಿ ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 km ದೂರವನ್ನು 6ನಿಮಿಷಗಳಲ್ಲಿ ಪ್ರಯಾಣಿಸಿ/ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಣವನ್ನು ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗು ಅವರ ಪ್ರಶಂಷೆ ಗೆ ಪಾತ್ರ ವಾಗಿದೆ
ಕರಾವಳಿಯಲ್ಲಿ ಬಸ್ಸು ಚಾಲಕ ನಿರ್ವಹಕ ಶ್ರಮಿಕ ವರ್ಗ ಮಾನವೀಯತೆ ಯ ಆಗರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ
0 Comments