ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಂಗ ಸಂಸ್ಕೃತಿ ಕಾರ್ಯಾಗಾರ

ಜಾಹೀರಾತು/Advertisment
ಜಾಹೀರಾತು/Advertisment

 ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಂಗ ಸಂಸ್ಕೃತಿ ಕಾರ್ಯಾಗಾರ

ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ ಮಾತ್ರವಲ್ಲ ಬದುಕಿನಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ. ರಂಗ ಸಂಸ್ಕೃತಿಯಂತಹ ಶಿಬಿರಗಳು ಜಿಲ್ಲೆಯಾದ್ಯಂತ ಏರ್ಪಡಿಸಬೇಕು ಎಂದು ಮಾದವ ಕೃಪಾ ಸ್ಕೂಲ್ ನ ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಸಂತೋಷ್ ರವರು ಹೇಳಿದರು.


 ಅವರು ಮಣಿಪಾಲದ ಸರಳೇಬೆಟ್ಟುವಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ರವರ ನೇತೃತ್ವದಲ್ಲಿ ನಡೆದ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಏರ್ಪಡಿಸಲಾದ ಕಾಸರಗೋಡು ಚಿನ್ನ ನಿರ್ದೇಶನದಲ್ಲಿ ರಂಗಸಂಸ್ಕೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


 ರತ್ನ ಸಂಜೀವ ಕಲಾಮಂಡಲದಲ್ಲಿ ಜರಗಿದ ರಂಗಸಂಸ್ಕೃತಿ ಶಿಬಿರದ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ನಾಲ್ಕು ಸಾವಿರ ಮಕ್ಕಳಿಗೆ ರಂಗಸಂಸ್ಕೃತಿ ಶಿಬಿರವನ್ನು ಏರ್ಪಡಿಸಿ ರಂಗಭೂಮಿಯ ಬಗ್ಗೆ ಒಲವನ್ನು ಮೂಡಿಸುವ ಕೆಲಸವನ್ನು ಮಾಡಿದ್ದೇವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಿವಪ್ರೇರಣಾ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮಹೇಶ್ ಠಾಕೂರ್ ರವರು ಗ್ರಾಮೀಣ ಪ್ರದೇಶದ ಮಕ್ಕಳಿಗೆ ತಬಲ, ಹಾರ್ಮೋನಿಯಂ, ಶಾಸ್ತ್ರೀಯ ಸಂಗೀತ, ಡ್ರಾಯಿಂಗ್, ತರಗತಿಗಳನ್ನು ಸುಮಾರು ಎರಡು ವರ್ಷಗಳಿಂದ ಉಚಿತವಾಗಿ ಏರ್ಪಡಿಸಿ ನಮ್ಮ ಭಾರತೀಯ ಸಂಸ್ಕೃತಿಯನ್ನು ಪ್ರೀತಿಸುವ ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಇದೀಗ ಈ ಸಾಲಿಗೆ ರಂಗಸಂಸ್ಕೃತಿ ಕೂಡ ಸೇರಿಸಿದ್ದೇವೆ. ಮುಂದಿನ ದಿನಗಳಲ್ಲಿ ಉಡುಪಿ ಪರಿಸರದ ಶಾಲಾ ಕಾಲೇಜುಗಳಲ್ಲಿ ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಈ ಕಾರ್ಯ ಮಾಡಲಿದೆ ಎಂದು ಹೇಳಿದರು.


ರಂಗಸಂಸ್ಕೃತಿ ಕಾರ್ಯಾಗಾರದಲ್ಲಿ ಮೂಕಾಭಿನಯ, ಧ್ವನಿ, ಆಶುರಚನೆ, ನಡೆ, ಪ್ರಸಾದನ ಇತ್ಯಾದಿ ಕಲೆಗಳ ಅಭ್ಯಾಸವನ್ನು ನಡೆಸಿಕೊಡಲಾಯಿತು.


ಪರ್ಕಳ ಪ್ರೌಢಶಾಲೆಯ ಸಂಚಾಲಕರಾದ ದಿನೇಶ್ ಹೆಗ್ಡೆ, ಸ್ಥಳೀಯರಾದ‌ ಶಿಲ್ಪಾ ಸಾಮಂತ್, ಟ್ರಸ್ಟ್ ನ ಟ್ರಸ್ಟಿ ರಮಾನಂದ್ ಸಾಮಂತ್, ಕಾರ್ಯದರ್ಶಿ ಅಶ್ವಿನಿ ಮಹೇಶ್ ಠಾಕೂರ್‌, ಉದಯವಾಣಿ ದಿನ ಪತ್ರಿಕೆಯ ಮಾಜಿ ಸಂಪಾದಕರಾದ ನಿತ್ಯಾನಂದ ಪಡ್ರೆ, ರಂಗಭೂಮಿ ಕಾರ್ಯಕರ್ತ ಶಶಿ ಭೂಶಂಕಿನಿ ಹಾಗೂ ಇತರರು ಉಪಸ್ಥಿತರಿದ್ದರು.

Post a Comment

0 Comments