ಆಡಳಿತ ಸೌಧದಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಜಾಹೀರಾತು/Advertisment
ಜಾಹೀರಾತು/Advertisment

 ಆಡಳಿತ ಸೌಧದಲ್ಲಿ 78ನೇ ಸ್ವಾತಂತ್ರ್ಯೋತ್ಸವ

ದೇಶವನ್ನು ಸುಭದ್ರ ಮತ್ತು ಶಕ್ತಿಶಾಲಿಯಾಗಿ ರೂಪಿಸೋಣ: ಶ್ರವಣ್ ಕುಮಾರ್


ಮೂಡುಬಿದಿರೆ: ವಿದೇಶಿಯರ ಆಳ್ವಿಕೆಯಲ್ಲಿದ್ದ ಭಾರತ ದೇಶವನ್ನು ನಮ್ಮ ದೇಶ ಭಕ್ತ ನಾಯಕರು ತಮ್ಮ ದೇಹವನ್ನು ಪಣಕ್ಕಿಟ್ಟು ಹೋರಾಡಿದರ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಇದನ್ನು ನಾವು ಸಂರಕ್ಷಿಸಿ ನಮ್ಮ ದೇಶವನ್ನು ಸುಭದ್ರ ಮತ್ತು ಶಕ್ತಿಶಾಲಿಯಾಗಿ ರೂಪಿಸಬೇಕಾಗಿದೆ ಎಂದು ಐಎಎಸ್ ಪ್ರೊಬೆಶನರಿ ಶ್ರವಣ್ ಕುಮಾರ್ ಹೇಳಿದರು.


  ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಡಳಿತ ಸೌಧದಲ್ಲಿ ನಡೆದ 78 ನೇ ಸ್ವಾತಂತ್ರ್ಯೋವದಲ್ಲಿ ಧ್ವಜವನ್ನು ಅರಳಿಸಿ ಮಾತನಾಡಿದರು.

 


ಶಾಸಕ ಉಮಾನಾಥ ಕೋಟ್ಯಾನ್ ಅದ್ಯಕ್ಷತೆ ವಹಿಸಿ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿ ತಾಲೂಕಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿ ಜಾತಿ ಮತ, ಪಕ್ಷ, ಬೇಧ ಮರೆತು ಎಲ್ಲರೂ ಒಂದಾಗಿ ಆಚರಿಸುವ ದೇಶಪ್ರೇಮದ ಹಬ್ಬ ಸ್ವಾತಂತ್ರ್ಯ ದಿನಾಚರಣೆ. ಬೆರಳಿಕೆಯಷ್ಟು ಜನ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರೆ ಲಕ್ಷೋಪ ಲಕ್ಷ ಜನ ತಮ್ಮ ದೇಹವನ್ನು ಬಲಿದಾನ ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಸಶಕ್ತವಾಗಿ ಬೆಳೆಯುತ್ತಿದ್ದು ಇಡೀ ಜಗತ್ತು ನಮ್ಮ ದೇಶದತ್ತ ತಿರುಗಿ ನೋಡುವಂತೆ ಮೆಟ್ಟಿಲನ್ನು ಏರುತ್ತಿದೆ ಎಂದರು.

  ಮೂಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 


, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಶಿಕ್ಷಣಾಧಿಕಾರಿ ವಿರೂಪಾಕ್ಷ, ವೈದ್ಯಾಧಿಕಾರಿ ಅಕ್ಷತಾ ನಾಯಕ್ ಉಪಸ್ಥಿತರಿದ್ದರು.

ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಸ್ವಾಗತಿಸಿದರು. ಉಪತಹಶೀಲ್ದಾರ್ ರಾಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


 ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್ ಸಿಸಿ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

Post a Comment

0 Comments