ಯುವವಾಹಿನಿ ಮೂಡುಬಿದಿರೆಯಿಂದ "ಗುರು ಸ್ಮರಣೆ’ ಕಾರ್ಯಕ್ರಮ

ಜಾಹೀರಾತು/Advertisment
ಜಾಹೀರಾತು/Advertisment

 ಯುವವಾಹಿನಿ ಮೂಡುಬಿದಿರೆಯಿಂದ  "ಗುರು ಸ್ಮರಣೆ’ ಕಾರ್ಯಕ್ರಮ

ಮೂಡುಬಿದಿರೆ: ಯುವವಾಹಿನಿ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಸಹಯೋಗದೊಂದಿಗೆ ಆಯೋಜಿಸಿದ್ದ  ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ  ಶ್ರೀ ನಾರಾಯಣ ಗುರುಗಳ ಭಾವಚಿತ್ರ ರಚನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ 'ಗುರು ಸ್ಮರಣೆ ' ಕಾರ್ಯಕ್ರಮವು ಆಳ್ವಾಸ್ ನ ಕುವೆಂಪು ಸಭಾಂಗಣದಲ್ಲಿ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ  ಓರ್ವ ಸಮಾಜ ಸುಧಾರಕರಾಗಿ ನಾರಾಯಣ ಗುರು ಒಂದು ಜಾತಿ ಧರ್ಮದ ಗುರುವಲ್ಲ.  ಅವರು ಹೇಳಿದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವುದು ಮನುಷ್ಯ ಧರ್ಮದ ಸಾರ.  ಚತುರ್ವರ್ಣ ಕರಾಳ ವ್ಯವಸ್ಥೆಯ ವಿರುದ್ಧದ ಹೋರಾಟವೇ ನಾರಾಯಣ ಗುರುಗಳ ಸಮಾಜ ಸುಧಾರಣೆ  ಎಂದರು.

 ನಾರಾಯಣ ಗುರುಗಳ ಧಾರ್ಮಿಕ  ಸುಧಾರಣಾ ಚಳುವಳಿಗಳು  ಬೇರೆ  ಚಳುವಳಿಗಾರರ ಚಳುವಳಿಗಿಂತ ಭಿನ್ನವಾಗಿದ್ದವು. ಯುದ್ಧಕ್ಕೆ ಬಂದವರನ್ನು ಶಾಸ್ತ್ರವಿಲ್ಲದೆ ಹಿಮ್ಮೆಟ್ಟಿದ ಕೀರ್ತಿ ಅವರದು. ಪೂಜೆಗಾಗಿ ಕೆಳಜಾತಿಯವರನ್ನು ನೇಮಿಸಿದ ಅವರು, ವಿವಾಹಗಳನ್ನು ಸರಳಗೊಳಿಸಿ, ಮಧ್ಯಪಾನದ ವಿರುದ್ಧ ಹೋರಾಟ ನಡೆಸಿದರು.    ಇಂದಿನ ಜಯಂತಿಗಳು ಜಾತಿಯ ಆಧಾರದಲ್ಲಿ ನಡೆಯುತ್ತಿರುವ ಕುರಿತು ವಿಷಾದ ವ್ಯಕ್ತಪಡಿಸಿದರು.

 ಶಾಸಕ ಉಮಾನಾಥ ಎ. ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ  ನಾರಾಯಣಗುರುಗಳು  ಯಾವುದೇ ಸಮುದಾಯ, ಸಮಾಜ, ವರ್ಗಕ್ಕೆ ಸೇರಿದವರಲ್ಲ. ಅವರು ಲೋಕ ಸಂತ.  ಅವರ ಬಳಿಯಿಂದ ಮಹಾತ್ಮ ಗಾಂದಿ, ರವೀಂದ್ರನಾಥ್ ಟಾಗೋರ್ ಮಾರ್ಗದರ್ಶನ ಪಡೆಯುತ್ತಿದ್ದರು ಎಂದು ತಿಳಿಸಿದರು.  ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ  ಭಾಗವಹಿಸುವುದು ಕೇವಲ ಪ್ರಶಸ್ತಿ ಗೆಲ್ಲುವುದಕ್ಕೇ ಸೀಮಿತವಾಗಿರದೆ ಪ್ರತೀ ಹಂತದಲ್ಲಿ ಕಲಿಯುವಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಯುವವಾಹಿನಿ ಮೂಡುಬಿದಿರೆ ಸಮಿತಿಯ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾರಾಯಣಗುರುಗಳ ಕುರಿತು ಏರ್ಪಡಿಸಿದ್ದ ಇಂದಿನ ಸ್ಪರ್ಧೆಗೆ ದಾಖಲೆ ಸಂಖ್ಯೆಯ ವಿದ್ಯಾರ್ಥಿಗಳು ಹೆಸರು ನಮೂದಿಕೊಂಡು ಪಾಲ್ಗೊಳ್ಳುತ್ತಿರುವುದು  ಸಂತೋಷ ವಿಷಯ ಎಂದರು.  

ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ  ಅಧ್ಯಕ್ಷ ಹರೀಶ್ ಹರೀಶ್ ಕೆ. ಪೂಜಾರಿ, ನಿಶ್ಮಿತಾ ಸಂಸ್ಥೆಯ ಅಧ್ಯಕ್ಷ ನಾರಾಯಣ ಪಿ. ಎಂ., ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಮೂಡುಬಿದಿರೆಯ ಬ್ರಹ್ಮಶ್ರೀ  ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಶೋಕ್ ಬಿ. ಉಸ್ಥಿತರಿದ್ದರು.  ಯುವವಾಹಿನಿ ಸಮಿತಿಯ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ವಂದಿಸಿದರು. ಹನಿ ಆನಂದ್ ಕಾರ್ಯಕ್ರಮ ನಿರೂಪಿಸಿದರು. 

ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ  ಶ್ರೀ ನಾರಾಯಣ ಗುರುಗಳ ಭಾವಚಿತ್ರ ರಚನೆಗೆ ೭೦೦ ವಿದ್ಯಾರ್ಥಿಗಳು,  ಪ್ರಬಂಧ ಸ್ಪರ್ಧೆಗೆ ೧೬೨ ಹಾಗೂ ಹಾಗೂ ಭಾಷಣ ಸ್ಪರ್ಧೆಗೆ ೬೦ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೯೨೫ ವಿದ್ಯಾರ್ಥಿಗಳು ಪಾಲ್ಗೊಂಡರು.

Post a Comment

0 Comments