ಜೈನ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ
ಸಮೃದ್ಧ ಭಾರತದ ಕನಸು ನನಸಾಗಲಿ: ಡಾ.ಪ್ರಭಾತ್ ಬಲ್ನಾಡು
ಮೂಡುಬಿದಿರೆ: ಜೈನ ಪದವಿಪೂರ್ವ ಕಾಲೇಜಿನಲ್ಲಿ 78ನೇಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಭಾತ್ ಬಲ್ನಾಡು ಅವರು ಧ್ವಜಾರೋಹಣಗೈದು ಮಾತನಾಡಿ
ಸಮೃದ್ಧ ಭಾರತದ ಕನಸು ನನಸಾಗಲಿ
ಆ ಮೂಲಕ ತ್ಯಾಗ ಬಲಿದಾನಗಳ ಹಿಂದಿನ ನಿರೀಕ್ಷೆಗಳು ಫಲ ನೀಡಲಿ ಎಂಬುದಾಗಿ ಸಂದೇಶವನ್ನು ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಚೇತನ ರಾಜೇಂದ್ರ ಹೆಗಡೆ ಅವರು ಸ್ವಾತಂತ್ರ್ಯ ಪಡೆದು 77 ವರ್ಷಗಳು ಕಳೆದ ಈ ಸಂದರ್ಭದಲ್ಲಿ ನೈತಿಕ ಮೌಲ್ಯಗಳ ಅಧಪತನದತ್ತ ವಿದ್ಯಾರ್ಥಿಗಳ ಗಮನ ಸೆಳೆದರು. ಭವ್ಯ ಭಾರತದ ಮುಂದಿನ ಪ್ರಜೆಗಳಾಗಿರುವ ವಿದ್ಯಾರ್ಥಿಗಳು ತಮ್ಮ ಅಂತ ಸತ್ವವನ್ನು ವೃದ್ಧಿಸಿಕೊಂಡು ಒಬ್ಬ ಉತ್ತಮ ಪ್ರಜೆಯಾಗಬೇಕು. ಗುರು ಹಿರಿಯರಿಗೆ ಗೌರವವನ್ನು ನೀಡುವುದರ ಮೂಲಕವಾಗಿಯೇ ಸಾಧನೆಗೆ ಅಡಿಗಲ್ಲು ಹಾಕಬೇಕೆಂದು ಕರೆ ನೀಡಿದರು .
ಕಾಲೇಜಿನ ಪ್ರಾಂಶುಪಾಲ ಅಧ್ಯಕ್ಷತೆ ವಹಿಸಿದ್ದರು. ನಶಾ ಮುಕ್ತ ಭಾರತದ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು
.ಭಾಷಣ ಚಿತ್ರಕಲೆ ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
0 Comments