ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ
ಮೂಡುಬಿದಿರೆ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ
ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. ೧೭ ರಿಂದ ೨೩ ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ
ಎಕ್ಸಲೆಂಟ್ ಪದವಿ ಪರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ, ನೃತ್ಯ, ಭಾಷಣ, ಪ್ರಬಂಧ, ಚಿತ್ರಕಲೆ, ಪೋಸ್ಟರ್
ಮೇಕಿಂಗ್, ಕರ್ಯಕ್ರಮ ನಿರೂಪಣೆ ಹೀಗೆ ಹಲವು ವಿಧದಲ್ಲಿ ತನ್ನನ್ನು ತೊಡಗಿಸಿಕೊಂಡು ಉತ್ತಮ ಸಾಂಸ್ಕೃತಿಕ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ.
ರಾಷ್ಟ್ರಮಟ್ಟದ ಶಿಬಿರಕ್ಕೆ ಆಯ್ಕೆಯಾದ ವಿದ್ಯರ್ಥಿನಿಯನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದಿಸಿದ್ದಾರೆ.
0 Comments