ಕುತ್ಲೂರು ಗ್ರಾಮಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ

ಜಾಹೀರಾತು/Advertisment
ಜಾಹೀರಾತು/Advertisment

 ಕುತ್ಲೂರು ಗ್ರಾಮಕ್ಕೆ ರಾಷ್ಟ್ರ ಪ್ರಶಸ್ತಿಯ ಗರಿ

ಮೂಡುಬಿದಿರೆ: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ' ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ' ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.

  ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ 'ಅತ್ಯುತ್ತಮ ಪ್ರವಾಸಿ ಹಳ್ಳಿಗಳು' ಸ್ಪರ್ಧೆಯಲ್ಲಿ ದ.ಕ.ಜಿಲ್ಲೆಯಿಂದ ಕುತ್ಲೂರು ಆಯ್ಕೆಯಾದ ಗ್ರಾಮವಾಗಿದೆ.

 

  ಸೆ.27ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದ್ದು  ಭಾರತದ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್,  ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


ಕುತ್ಲೂರು ಗ್ರಾಮಸ್ಥರ ಪರವಾಗಿ ಹರೀಶ್ ಡಿ'ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ  ಪ್ರವಾಸೋಧ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಫಿಟೀಷನ್ -2024ನ್ನು ಆಯೋಜಿಸಿತ್ತು.

  ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ.ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ'ಸಾಲ್ಯಾನ್, ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗುವಿನ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ಅದನ್ನು ಸ್ಪರ್ಧಾ ನಿಯಮದಂತೆ  ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡಿದ್ದರು.

 ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತು. ದೇಶದಾದ್ಯಂತ ನಡೆದ ಈ ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ಇಲ್ಲಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆಯಿದೆ.

Post a Comment

0 Comments