ಜೈನ್ ಮಿಲನ್ ಲಂಡನ್ ಇದರ ವಾರ್ಷಿಕ ಸಭೆಯು ಶಾಂತಿನಾಥ ದಿಗಂಬರ ಜೈನ ಬಸದಿ , Slough, ಇಂಗ್ಲೆಂಡ್ ನಲ್ಲಿ 28 ಸೆಪ್ಟೆಂಬರ್ ಶನಿವಾರ ನಡೆಯಿತು.
ಮೊದಲಿಗೆ ವಿಜಯ್ ಭಯ್ಯಾಜಿ ಅವರ ಮಾರ್ಗದರ್ಶನದಲ್ಲಿ ಅಭಿಷೇಕ,ಪೂಜಾ ಕಾರ್ಯಕ್ರಮ ಗಳು ನಡೆದವು .
ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜೈನ್ ಮಿಲನ್ ಅಧ್ಯಕ್ಷ Dr. ನರೇಂದ್ರ ಅಳದಂಗಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು .
ಮಿಲನ್ ಸದಸ್ಯರು ಪ್ರಾರ್ಥನೆ ಹಾಗೂ ಸಾಮೂಹಿಕ ಪಂಚ ನಮಸ್ಕಾರ ಪಠಣ ದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು .
ಆರವ್ ಜೈನ್ ಅವರು ಜೈನ ಧರ್ಮದ ಮಹತ್ವದ ಬಗ್ಗೆ ಮಾತನಾಡಿದರು .
ಕೈವಲ್ಯ ಮತ್ತು ಕೇವಲ್ ಜೈನ್ ಪಂಚ ಪರಮೇಸ್ಟಿ ಸ್ತುತಿ ಹಾಡಿದರು.
ಸಾರ್ಥಕ್ ಜೈನ್ ಜಿನ ಭಜನೆ ಹಾಡಿದರು .
ದೀಕ್ಷಾ ಜೈನ್ ಅವರು ಜೈನ ಧರ್ಮದಲ್ಲಿ ದೀಪಾವಳಿ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಜಿನ ಭಜನೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ಮಿಲನ್ ಸದಸ್ಯರಿಗೆ ಪ್ರಶಸ್ತಿ ಪತ್ರ ಗಳನ್ನು ನೀಡಿ ಗೌರವಿಸಲಾಯಿತು .
ಮಿಲನ್ ಉಪಾಧ್ಯಕ್ಷ ನಿಖಿಲ್ B.A ಅವರು ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವ ಆಚರಿಸುವ ಮಿಲನ್ ಸದಸ್ಯರಿಗೆ ಶುಭ ಹಾರೈಸಿದರು .
ಕೋಶಾಧಿಕಾರಿ Dr. ವೈಶಾಕ್ ಬಲ್ಲಾಳ್ ವಂದಿಸಿದರು.
ಮಿಲನ್ ಕಾರ್ಯದರ್ಶಿ ಅಶ್ವಿನಿ ಚಂದ್ರ ಪ್ರಭು ಅವರು ಕಾರ್ಯಕ್ರಮ ನಿರೂಪಿಸಿ , ಸಭಾ ಕಾರ್ಯಕ್ರಮ ದ ನಂತರ ಸದಸ್ಯರಿಗೆ ಮೋಜಿನ ಸ್ಪರ್ಧೆಗಳನ್ನು ನಡೆಸಿಕೊಟ್ಟರು .
ಕಾರ್ಯಕ್ರಮದ ಆತಿಥೇಯ ರಾಗಿ ಸಂಪತ್ ಕುಮಾರ್, ಶೀತಲ್ ಜೈನ್ ,ಧೀರೇಂದ್ರ ಬಲ್ಲಾಳ್ ಕುಟುಂಬದವರು ಸಹಕರಿಸಿದರು.
--------
ವರದಿ
ಧೀರೇಂದ್ರ ಬಲ್ಲಾಳ್
0 Comments