ಅ.26 : ಯುವವಾಹಿನಿ ಬೆದ್ರ ಘಟಕದಿಂದ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಮೂಡುಬಿದಿರೆ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಮೂಡುಬಿದಿರೆ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಾರ್ವಜನಿಕರಿಗಾಗಿ ಮೂರನೇ ವರ್ಷದ 'ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ-2024' ಸಮಾಜ ಮಂದಿರದಲ್ಲಿ ಅ.26ರಂದು ನಡೆಯಲಿದೆ ಎಂದು ಸಂಘಟಕರಾದ ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಮತ್ತು ಯುವವಾಹಿನಿ ಘಟಕದ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
0 Comments