ನಾಳೆ ಮೂಡುಬಿದಿರೆಯಲ್ಲಿ ಸಂಚಾರ ನಿಯಮ ಬದಲಾವಣೆ

ಜಾಹೀರಾತು/Advertisment
ಜಾಹೀರಾತು/Advertisment

 ನಾಳೆ ಮೂಡುಬಿದಿರೆಯಲ್ಲಿ ಸಂಚಾರ ನಿಯಮ ಬದಲಾವಣೆ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಪುತ್ತಿಗೆ ಇದರ  ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ನಾಳೆ 28-02-2025ನೇ ಶುಕ್ರವಾರದಿಂದ ದಿನಾಂಕ 07-03-2025ನೇ ಶುಕ್ರವಾರದ ವರೆಗೆ  ನಡೆಯಲಿರುತ್ತದೆ. ಆ ಪ್ರಯುಕ್ತ ನಾಳೆ 28-02-2025ರಂದು ಮಧ್ಯಾಹ್ನ 2.00 ಗಂಟೆಗೆ ಮೂಡುಬಿದಿರೆ ಪೇಟೆಯಿಂದ ಹಸಿರು ಹೊರೆ ಕಾಣಿಕೆ ನಡೆಯಲಿದ್ದು, ಹಸಿರು ಹೊರ ಕಾಣಿಕೆಯ ಮೂಡುಬಿದಿರೆ ಮುಖ್ಯ ಪೇಟೆಯಿಂದ ಹೊರಡುವುದರಿಂದ ಸಾವಿರಾರು  ಭಕ್ತಾದಿಗಳು ಹಾಗೂ ಹೊರೆ ಕಾಣಿಕೆ ಹೊತ್ತ ಹೆಚ್ಚಿನ ವಾಹನಗಳು ಸೇರುವ ನಿರೀಕ್ಷೆ ಇರುತ್ತದೆ. ಆದುದರಿಂದ ಮಧ್ಯಾಹ್ನ 2.00 ಗಂಟೆಯ ನಂತರ ಮೂಡಬಿದರೆ ಪೇಟೆಯಲ್ಲಿನ ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆಗಳನ್ನು  ಮಾಡಲಾಗಿದ್ದು,  ಸಾರ್ವಜನಿಕರು  ಮೂಡುಬಿದಿರೆಯ ನಗರಕ್ಕೆ  ಬಾರದೇ  ಮೂಡುಬಿದಿರೆಯ ಹೊರ ವರ್ತುಲಾ (ಬೈಪಾಸ್) ರಸ್ತೆಯಲ್ಲಿ ಹಾಗೂ ವಿದ್ಯಾಗಿರಿ- ಮಾಸ್ತಿಕಟ್ಟೆ – ಬೊಗ್ರುಗುಡ್ಡೆ –ಪೇಪರ್ ಮೀಲ್ ಒಳ ರಸ್ತೆಯಿಂದಾಗಿ ಹಸಿರು ಹೊರೆ ಕಾಣಿಕೆ ಮುಗಿಯುವ ವರೆಗೂ ಸಂಚರಿಸಿ  ಸಹಕರಿಸಬೇಕಾಗಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ 

      ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

Post a Comment

0 Comments