ವಿದ್ಯುತ್ ಗುತ್ತಿಗೆದಾರ ಆತ್ಮಹತ್ಯೆ
ಮೂಡುಬಿದಿರೆ : ಇಲ್ಲಿನ ಸ್ವರಾಜ್ಯ ಮೈದಾನ ಬಳಿಯ ನಿವಾಸಿ, ವಿದ್ಯುತ್ ಗುತ್ತಿಗೆದಾರ ಏಳ್ನಾಡುಗುತ್ತು ವೈ. ಸತ್ಯ ಪ್ರಕಾಶ್ ಹೆಗ್ಡೆ (49ವ) ಗುರವಾರ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ವಷ೯ಗಳಿಂದ ವಿದ್ಯುತ್ ಗುತ್ತಿಗೆದಾರನಾಗಿ ಗುರುತಿಸಿಕೊಂಡಿದ್ದ ಅವರು ಇತ್ತೀಚೆಗೆ ಪಾಶ್ವ೯ವಾಯುಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಆದರೆ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 Comments