ಅಕ್ರಮ ದನಸಾಗಾಟವೆಂದು ಸಂಶಯಪಟ್ಟು ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ: ಈವ೯ರ ಬಂಧನ
ಮೂಡುಬಿದಿರೆ : ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದಾರೆಂದು ಸಂಶಯಗೊಂಡ ಬಜರಂಗದಳದ ಕಾಯ೯ಕತ೯ರು ಇಬ್ಬರು ವ್ಯಕ್ತಿಗಳ ಮೇಲೆ ಗಂಭೀರ ಹಲ್ಲೆ ನಡೆಸಿ ವಾಹನವನ್ನು ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಬಜರಂಗದಳದ ಕಾಯ೯ಕತ೯ರೆನ್ನಲಾದ ಕಡಂದಲೆಯ ಸುಧೀರ್ ಶೆಟ್ಟಿ ಹಾಗೂ ಸುರತ್ಕಲ್ ನ ಧನರಾಜ್ ಬಂಧಿತ ಆರೋಪಿಗಳಾಗಿದ್ದು ಉಳಿದ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಮೂಡುಬಿದಿರೆ ಬಿರಾವಿನ ಕೂಸಪ್ಪ ಪೂಜಾರಿ ಅವರು ತನ್ನ ಪರಿಚಯದ ಕಾರ್ಕಳದ ಬಜಗೋಳಿಯ ಮನೆಯಿಂದ ಗಿರ್ ತಳಿಯ ಹೋರಿಯೊಂದನ್ನು ಸಂಗಬೆಟ್ಟುವಿನ ಅಬ್ದುಲ್ ರಹ್ಮಾನ್ ಅವರ ವಾಹನದಲ್ಲಿ ಮೂಡುಬಿದಿರೆಯತ್ತ ತರುತ್ತಿದ್ದರು.
ಗಿರ್ ಹೋರಿಯನ್ನು ಗರ್ಭದಾರಣೆಯ ವಿಷಯದಲ್ಲಿ ತರುತ್ತಿದ್ದರೆನ್ನಲಾಗಿದೆ.ಈ ಸಂದರ್ಭದಲ್ಲಿ ಬೆಳುವಾಯಿ ಬಳಿ ವಾಹನವನ್ನು ತಡೆದು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು ವಾಹನದಲ್ಲಿದ್ದ ಕೂಸಪ್ಪ ಪೂಜಾರಿ ಹಾಗೂ ಅಬ್ದುಲ್ ರಹ್ಮಾನ್ ಅವರಿಬ್ಬರ ಮೇಲೂ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಸಾಗಾಟಕ್ಕೆ ಸಂಬಂಧಿಸಿ ದಾಖಲೆಪತ್ರಗಳನ್ನು ತೋರಿಸಿದರೂ ಅದನ್ನು ಪರಿಶೀಲಿಸದೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮೂಡುಬಿದಿರೆ ಆಳ್ವಾಸ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಅವರು ಸುಧೀರ್ ಶೆಟ್ಟಿ ಮತ್ತು ಧನರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಕೂಸಪ್ಪ ಅವರು ನೀಡಿರುವ ದೂರಿನಂತೆ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದ್ದು ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ.
0 Comments