ಇಎಸ್ಐ ಆರೋಗ್ಯ ವಿಮೆ ವೇತನ ಹೆಚ್ಚಿಸಲು ಕೇಂದ್ರ ಕಾರ್ಮಿಕ ಸಚಿವರಿಗೆ ಸಂಸದ ಕೋಟ ಮನವಿ-ಬ್ರಹ್ಮಾವರದ ಇಎಸ್ಐ ಆಸ್ಪತ್ರೆ ಪ್ರಾರಂಭಿಸಲೂ ಮನವಿ
ಇ.ಎಸ್.ಐ ಕೇಂದ್ರ ಪ್ರಾಯೋಜಿತ ಆರೋಗ್ಯ ವಿಮೆ ಇಪ್ಪತ್ತೊಂದು ಸಾವಿರದ ಒಳಗೆ ವೇತನ ಪಡೆಯುವ ಸಿಬ್ಬಂದಿಗಳಿಗೆ ಸೀಮಿತವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಸರಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ವೇತನವನ್ನು ಪರಿಷ್ಕರಣೆ ಮಾಡಿದ ಹಿನ್ನೆಲೆಯಲ್ಲಿ ಬಹುತೇಕ ಮಂದಿ ಕಾರ್ಮಿಕರು ಹೆಚ್ಚು ವೇತನ ಪಡೆಯುತ್ತಿದ್ದುದರಿಂದ ವೇತನದ ಮಿತಿಯನ್ನು ಇಪ್ಪತ್ತೊಂದು ಸಾವಿರದಿಂದ ಮೂವತ್ತು ಸಾವಿರಕ್ಕೆ ಏರಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೇಂದ್ರ ಕಾರ್ಮಿಕ ಸಚಿವ ಡಾ.ಮನ್ಸುಕ್ ಮಾಂಡವೀಯರವರಿಗೆ ಲಿಖಿತ ಮನವಿ ಸಲ್ಲಿಸಿ ವೇತನ ಮಿತಿಯನ್ನು ಪರಿಷ್ಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಪ್ರಸ್ತಾಪಿತ ಇ.ಎಸ್.ಐ ಆಸ್ಪತ್ರೆಯನ್ನು ಶೀಘ್ರ ಪ್ರಾರಂಭಿಸಲು ಕೋರಿಕೆ ಸಲ್ಲಿಸಿದರು. ಸಂಸದರ ಮನವಿ ಪರಿಶೀಲಿಸಿದ ಕೇಂದ್ರ ಸಚಿವರು, ಇ.ಎಸ್.ಐ ಮೊತ್ತ ಪರಿಷ್ಕರಣೆ ಹಾಗೂ ಬ್ರಹ್ಮಾವರದ ಆಸ್ಪತ್ರೆ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು.
0 Comments