ಸಿಎಂ ಮೊಮ್ಮೊಗ, ಜಮೀರ್ ಮಗ, ರಿಜ್ವಾನ್ ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ- ಪ್ರತಾಪ್ ಸಿಂಹ ಸರಕಾರಕ್ಕೆ ಪ್ರಶ್ನೆ!
ಸಚಿವರಾದ ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಸಿದ್ಧರಾಮಯ್ಯನವರ ಮೊಮ್ಮೊಗ, ಸಚಿವರುಗಳ, ಶಾಸಕರ, ಅಧಿಕಾರಿಗಳ ಮಕ್ಕಳಿಗೆ, ಸಂಬಂಧಿಕರಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ?, ಆಂಧ್ರದಲ್ಲಿ ನಟ ಅಲ್ಲು ಅರ್ಜುನ್ ನನ್ನು ಕಾಲ್ತುಳಿತ ಪ್ರಕರಣದಲ್ಲಿಯೇ ಅರೆಸ್ಟ್ ಮಾಡಿದ್ರು. ಈಗ ಇಲ್ಲಿ ಸಿಎಂ ಅರೆಸ್ಟ್ ಆಗುತ್ತಾರಾ? ಡಿಸಿಎಂ ಅರೆಸ್ಟ್ ಆಗುತ್ತಾರಾ, ಗೃಹಮಂತ್ರಿ ತಲೆದಂಡ ಆಗುತ್ತಾ? ಯಾರು ಇದಕ್ಕೆ ಹೊಣೆ ಹೇಳಿ. ತಿಪ್ಪೆ ಸಾರಿಸಲು ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದರು.
ಡಿಸಿಎಂ ಶಾಲು, ಗ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದು ಬಿಟ್ಟರೆ ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೇ ಬಂದು ಬಿಡ್ತೀನಿ, ಪ್ರೋಗ್ರಾಂ ಮಾಡಿ ಅಂದಿದ್ರಾ? ನಿಮಗೆ ಮರುದಿನವೇ ಕಾರ್ಯಕ್ರಮ ಮಾಡುವ ಒತ್ತಡ ಏನಿತ್ತು, ಹೇಳಿ. ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರಕಾರಕ್ಕೆ ಮಿನಿಮಮ್ ಕಾಮನ್ ಸೆನ್ಸ್ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡರು.
ಸಿಎಂ ಮೊಮ್ಮೊಗ, ಸಚಿವರು ಮತ್ತು ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್, ಆಟೋಗ್ರಾಫ್ ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು. ಉತ್ತರಪ್ರದೇಶ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಗೆ ಭದ್ರತೆಯ ಪಾಠ ಮಾಡಿದ್ದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಈಗ ಎಲ್ಲಿ ಹೋದ್ರು ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ ಯುಪಿ ಸಿಎಂ 60 ಕೋಟಿ ಜನರನ್ನು ಸಂಭಾಳಿಸಿದ್ದಾರೆ. ನಿಮಗೆ 60 ಸಾವಿರ ಜನರನ್ನು ಸಂಭಾಳಿಸಲು ಆಗಲಿಲ್ಲ. ಆರ್ ಸಿಬಿ ಗೆಲ್ಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು ಎಂದು ಬೇಸರ ವ್ಯಕ್ತಪಡಿಸಿದರು.
0 Comments