ಶಿರ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್ ಆಯ್ಕೆ
ಮೂಡುಬಿದಿರೆ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್ ಅವರು ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಚಿಂತನ್ ಸಿಲ್ವನ್ ಲೋಬೋ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾದ ತಾರನಾಥ ಶೆಟ್ಟಿ, ಕೆ.ಎಚ್ ಲಕ್ಷ್ಮಣ್, ಅಬ್ದುಲ್ ಖಾದರ್, ಸನತ್ ಶೆಟ್ಟಿ, ಆಗ್ನೆಸ್ ಡಿಸೋಜ, ಸುಗಂಧಿ, ರಾಘವ ಪಿ.ಸುವರ್ಣ, ಸದಾನಂದ ಸುವರ್ಣ, ಉಮೇಶ್ ನಾಯ್ಕ, ಸುದೀಪ್ ಉಪಸ್ಥಿತರಿದ್ದರು.
ಪ್ರವೀಣ್ ಕುಮಾರ್ ಅವರು ಈ ಹಿಂದೆ ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
0 Comments