ಇರುವೈಲಿನಲ್ಲಿ ಬೃಹತ್ ರಕ್ತದಾನ ಶಿಬಿರ : 90 ಯುನಿಟ್ ರಕ್ತ ಸಂಗ್ರಹ
ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ ಸಂಗ್ರಹವಾಗಿದೆ.
ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ನವೀನ್ ಪೂಜಾರಿ ಕಿಟ್ಟುಬೆಟ್ಟು, ನಾಗೇಶ್ ಅಮೀನ್ ಬಿಯಂದಕೋಡಿ, ಸಮಿತಿಯ ಪದಾಧಿಕಾರಿಗಳು , ಸದಸ್ಯರು ಹಾಗೂ ವೈದ್ಯರು, ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.
0 Comments