ಕೃಷ್ಣೋತ್ಸವದಂಗವಾಗಿ ವಿವಿಧ ಸ್ಪಧೆ೯
ಮೂಡುಬಿದಿರೆ : ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ 109ನೇ ವರ್ಷದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಕೃಷ್ಣೋತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್(ರಿ), ಅಬ್ಬಕ್ಕ ಬ್ರಿಗೇಡ್ ಮತ್ತು ಭಕುತಿ ಭಜನಾ ವೃಂದ ವತಿಯಿಂದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಹಾಗೂ ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.
ಉದ್ಯಮಿ ಶಿವಾನಂದ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೇವಸ್ಥಾನದ ಮುಕ್ತೇಸರರಾದ ಗುರುಪ್ರಸಾದ್ ಹೊಳ್ಳ, ಜವನೆರ್ ಬೆದ್ರ ಸಂಘಟನೆಯ ಸ್ಥಾಪಕ ಅಧ್ಯಕ್ಷ ಅಮರ್ ಕೋಟೆ, ಅಬ್ಬಕ್ಕ ಬ್ರಿಗೇಡ್ ಸಂಚಾಲಕಿ ಸಹನಾ ನಾಯಕ್, ಭಕುತಿ ಭಜನಾ ವೃಂದ ಸಂಚಾಲಕ ಪ್ರಥಮ್ ಎಸ್. ಬನ್ನಡ್ಕ, ಯುವ ಸಂಘಟನೆಯ ಸಂಚಾಲಕ ನಾರಾಯಣ ಪಡುಮಲೆ, ಸ್ಪರ್ಧೆಯ ಸಂಯೋಜಕಿ ಅಮಿತ ಬನ್ನಡ್ಕ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಅಬ್ಬಕ್ಕ ಬ್ರಿಗೇಡ್ ಸಂಘಟನಾ ಕಾರ್ಯದರ್ಶಿ ಸಾರಿಕಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಯುವ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಗುರುಪ್ರಸಾದ್ ಬಿ ಪೂಜಾರಿ ಸ್ಪರ್ಧಾ ಕಾರ್ಯಕ್ರಮ ನಿರೂಪಿಸಿದರು.
ನೂರಕ್ಕೂ ಅಧಿಕ ಸ್ಪಧಿ೯ಗಳು ಭಾಗವಹಿಸಿದ್ದರು.
0 Comments