ಪ್ರಶಾಂತ್ ಪೂಜಾರಿಯ ಹತ್ತನೇ ವರ್ಷದ ಪುಣ್ಯಸ್ಮರಣೆ-ಬಿಜೆಪಿ ಮೂಡುಬಿದಿರೆ ಮಂಡಲ ಭೇಟಿ

 ಪ್ರಶಾಂತ್ ಪೂಜಾರಿಯ ಹತ್ತನೇ ವರ್ಷದ ಪುಣ್ಯಸ್ಮರಣೆ-ಬಿಜೆಪಿ ಮೂಡುಬಿದಿರೆ ಮಂಡಲ ಭೇಟಿ

ಮೂಡುಬಿದಿರೆ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಹತ್ತು ವರ್ಷಗಳಾಗಿದ್ದು ಹತ್ತನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಇಂದು ಮೂಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ಪ್ರಶಾಂತ್ ಪೂಜಾರಿ ಮನೆಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬಾಹುಬಲಿ ಪ್ರಸಾದ್, ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಭರತ್ ಬೆಳುವಾಯಿ, ಉಪಾಧ್ಯಕ್ಷ ಸಚಿನ್ ಪಣಪಿಲ, ಬಿರಾವು ಶಕ್ತಿಕೇಂದ್ರ ಪ್ರಮುಖರಾದ ಬಾಲಕೃಷ್ಣ, ಬೂತ್ ಸಮಿತಿ ಅಧ್ಯಕ್ಷ ದಿವಾಕರ್, ಪ್ರಮುಖರಾದ ಲೋಕೇಶ್ ಶೆಟ್ಟಿ ತೋಡಾರು, ಯಶವಂತ್ ಮಾಸ್ತಿಕಟ್ಟೆ, ಮೃತ ಪ್ರಶಾಂತ್ ಪೂಜಾರಿ ತಾಯಿ, ಸಹೋಹದರಿ ಸೇರಿದಂತೆ ಕುಟುಂಬಸ್ಥರು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments

Advertisement