2026ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಷ್ಟ್ರ ಪ್ರಶಸ್ತಿಗೆ ಡಾ.ರಾಶಿರೂರು ಆಯ್ಕೆ: ಪ್ರೊ. ಪ್ರವೀಣ್

ಜಾಹೀರಾತು/Advertisment
ಜಾಹೀರಾತು/Advertisment

 *2026ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಷ್ಟ್ರ ಪ್ರಶಸ್ತಿಗೆ ಡಾ.ರಾಶಿರೂರು ಆಯ್ಕೆ: ಪ್ರೊ. ಪ್ರವೀಣ್ ಕನ್ಯಾಳ*

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ

ಡಾ. ರಾಮಕೃಷ್ಣ ಶಿರೂರು ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸದ್ಭಾವನಾ ರಾಷ್ಟ್ರ ಪ್ರಶಸ್ತಿ_2026ಗೆ ಆಯ್ಕೆಯಾಗಿರುತ್ತಾರೆ ಎಂದು ಕರ್ನಾಟಕ ರಾಜ್ಯ ಅಕ್ಷರದೀಪ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಪ್ರವೀಣ್ ಕನ್ಯಾಳ ಅವರುಪತ್ರಿಕೆಗೆ ತಿಳಿಸಿರುತ್ತಾರೆ. 


2026 ಜನವರಿ 11

ರಂದು ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆಯುವ ವಿವೇಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿರುತ್ತಾರೆ. 

 

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 

1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,

 1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಅವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೂಡುಬಿದರೆ ತಾಲೂಕು ಘಟಕದ ಅಧ್ಯಕ್ಷರಾಗಿ ಮತ್ತು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ 

ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮುಂದುವರಿಯಲಿ ಎಂದು ಅಕ್ಷರದೀಪ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಪ್ರವೀಣ್ ಕನ್ಯಾಳ ಮತ್ತು ಪ್ರಧಾನ ಕಾರ್ಯದರ್ಶಿ, ಕನ್ನಡ ಪ್ರಾಧ್ಯಾಪಕ ಪ್ರೊ. ದಾಂಡೇಲಿ ಗಣಪತಿ ಹೆಗಡೆ ಅವರು ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

Post a Comment

0 Comments