ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2025-26ಕ್ಕೆ ಸಭಾಪತಿ ಯು. ಟಿ. ಖಾದರ್ ಚಾಲನೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2025-26ಕ್ಕೆ ಸಭಾಪತಿ ಯು. ಟಿ. ಖಾದರ್ ಚಾಲನೆ





ಮೊದಲ ದಿನವೇ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’ 


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸ್ವರಾಜ್ ಮೈದಾನದಲ್ಲಿ ಐದು ದಿನಗಳ ಕಾಲ ನಡೆಯುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2025-26’ ಸೋಮವಾರ ಆರಂಭಗೊಂಡಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ 6ನೇ ಬಾರಿಗೆ (72, 75, 80, 79 ಹಾಗೂ 81) ನಡೆಯುತ್ತಿರುವ 85ನೇ ಕ್ರೀಡಾಕೂಟವನ್ನುವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಅವರು ತ್ರಿವರ್ಣ ಬೆಲೂನು ಗಾಳಿಗೆ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿ, 'ಆಳ್ವಾಸ್ ನಲ್ಲಿ ನಡೆಯುವ ಕ್ರೀಡಾಕೂಟವು ಜಾಗತಿಕ ಕೂಟದ ಮಾದರಿ. ದೇಶದ ಎಲ್ಲ ಕ್ರೀಡಾಕೂಟಗಳಿಗೂ ಹೆಗ್ಗುರುತು' ಎಂದು ಶ್ಲಾಘಿಸಿದರು.

'ವಿಶ್ವದ ಸಂಸ್ಕೃತಿಗಳ ಸಾರ ಭಾರತದ ಸಂಸ್ಕೃತಿಗಳ, ಭಾರತದ ಸಂಸ್ಕೃತಿ ಸಾರ ಕರ್ನಾಟಕ, ಕರ್ನಾಟಕದ ಸಂಸ್ಕೃತಿಗಳ ಸಾರ ದಕ್ಷಿಣ ಕನ್ನಡ, ದಕ್ಷಿಣ ಕನ್ನಡದ ಸಂಸ್ಕ್ರತಿಯ ಸಾರ ಆಳ್ವಾಸ್ ನಲ್ಲಿ' ಎಂದು ಬಣ್ಣಿಸಿದರು.

ಸತ್ ಪ್ರಜೆ ನಿರ್ಮಿಸುವ ಹಾಗೂ ಬಲಿಷ್ಠ ಭಾರತದ ನಿರ್ಮಾಣದ ಬುನಾದಿ ಈ ಕ್ರೀಡಾಕೂಟ ಎಂದ ಅವರು, ವಿದ್ಯಾರ್ಥಿಗಳೇ ದೇಶದ ಭವ್ಯ ಭವಿಷ್ಯ ಎಂದರು.



ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಕ್ರೀಡಾ ಒಕ್ಕೂಟದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ. ವಿಶ್ವವಿದ್ಯಾಲಯದ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಧ್ವಜಾರೋಹಣ ನೆರವೇರಿಸಿದರು.


ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸೀನ್ ಮಾತನಾಡಿ, ಕ್ರೀಡೆ ನಮ್ಮ ಏಕತೆಯ ಸಂಕೇತ. ಕ್ರೀಡಾ ಸ್ಫೂರ್ತಿಯ ಗೆಲುವು ನಮ್ಮದಾಗಬೇಕು. ಆಳ್ವಾಸ್ ಉತ್ತಮ ಶಿಕ್ಷಣ ನೀಡುವ ಸಂಸ್ಥೆಯಾಗಿದೆ. ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕೂಟದ ವೀಕ್ಷಕರಾದ ವಿ.ಶಂಕರ್ ಮಾತನಾಡಿ, ಡಾ. ಆಳ್ವ ಅವರ ಸಾಧನೆ ಅಪರಿಮಿತ. ಈ ರೀತಿ ಬೃಹತ್ ಕೂಟ ಸಂಘಟಿಸಲು ಆಳ್ವಾಸ್ ಗೆ ಮಾತ್ರ ಸಾಧ್ಯ ಎಂದರು.


ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ. ಮಾತನಾಡಿ, 'ಅತ್ಯುತ್ತಮ ಆತಿಥ್ಯ, ಸಂಘಟನೆ ಹಾಗೂ ಅಚ್ಚುಕಟ್ಟುತನದ ಸಾಕ್ಷಾತ್ಕಾರದಂತೆ ಡಾ.ಎಂ.ಮೋಹನ ಆಳ್ವ ಕ್ರೀಡಾಕೂಟ ಸಂಘಟಿಸಿದ್ದಾರೆ' ಎಂದು ಅಭಿನಂದಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್, ಮಾಜಿ ಸಚಿವ ಅಭಯಚಂದ್ರ ಜೈನ್ , ಇಫ್ತಿಕರ್ ಅಲಿ,

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ್ ಆಳ್ವ ಮತ್ತಿತರರು ಇದ್ದರು. 

ಕ್ರೀಡಾಜ್ಯೋತಿ ಬೆಳಗಿದ ಬಳಿಕ, ಕ್ರೀಡಾಪಟು ದೀಕ್ಷಿತಾ ರಾಮಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.


ಕ್ರೀಡಾಕೂಟದಲ್ಲಿ ದೇಶದ 304ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ನಾಲ್ಕು ಸಾವಿರಕ್ಕೂ ಅಧಿಕ ಅಥ್ಲೀಟ್‍ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದಾರೆ. 


  ಟ್ರೋಫಿಯನ್ನು ಪಲ್ಲಕ್ಕಿಯಲ್ಲಿ ತರಲಾಯಿತು.

ಇದಕ್ಕೂ ಮೊದಲು ಕ್ರೀಡಾಕೂಟದಲ್ಲಿ ಪಾಲ್ಗೊಂಡ ಎಲ್ಲ ವಿಶ್ವವಿದ್ಯಾಲಯಗಳ ಕ್ರೀಡಾಪಟುಗಳ ಪಥಸಂಚಲನ ನಡೆಯಿತು. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಗೌರವ ರಕ್ಷೆ ಸ್ವೀಕರಿಸಿದರು.

ಮಹಿಳಾ ಕಬಡ್ಡಿ ವಿಶ್ವಕಪ್‌ ವಿಜೇತ ಭಾರತೀಯ ತಂಡ ಪ್ರತಿನಿಧಿಸಿದ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಸಿಡಿಮದ್ದಿನ ಪ್ರದರ್ಶನವು ಆಗಸದಲ್ಲಿ ಚಿತ್ತಾರ ಮೂಡಿಸಿತು.

ರಾಜೇಶ್ ಡಿಸೋಜಾ, ವೇಣುಗೋಪಾಲ್, ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.


ಸ್ಪರ್ಧೆಗಳು: 

‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2025-26’ ಕ್ರೀಡಾಕೂಟದ ಮೊದಲ ದಿನವಾದ ಸೋಮವಾರ ನಡೆದ ಪುರುಷರ ಮತ್ತು ಮಹಿಳೆಯರ 10 ಸಾವಿರ ಮೀಟರ್ಸ್ ಓಟದ ಸ್ಪರ್ಧೆ ನಡೆಯಿತು. 

ಉಳಿದಂತೆ ಮಹಿಳಾ ಮತ್ತು ಪುರುಷರ ವಿಭಾಗದ 800 ಮೀ. ಓಟ, ತ್ರಿವಿಧ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಡಿಸ್ಕಸ್ ಥ್ರೋ, 400 ಮೀ. ಹರ್ಡಲ್ಸ್, 100 ಮೀ. ಓಟ, 4*400 ಮೀ. ರಿಲೇ ಸ್ಪರ್ಧೆಗಳ ಅರ್ಹತಾ ಸುತ್ತು ಹಾಗೂ ಸೆಮಿಫೈನಲ್ ನಡೆದವು. 

ಫಲಿತಾಂಶ: 

10,000 ಮೀಟರ್ಸ್ ಓಟ (ಪುರುಷ): ಗೌರವ್, ಮಹಾತ್ಮ ಜ್ಯೋತಿಬಾ ಫುಲೆ ವಿ.ವಿ (29:19.46)-1, ಆವ್ಕಾಶ್, ಎಂಡಿಯು ರೋಹ್ತಕ್ ವಿ.ವಿ. (29:19.91)-2, ಪ್ರಿನ್ಸ್‍ರಾಜ್ ಯಾದವ್, ಆದಿಕವಿ ಶ್ರೀಮಹರ್ಷಿ ವಿ.ವಿ. (29:21.40)-3, 

10,000 ಮೀಟರ್ಸ್ ಓಟ (ಮಹಿಳೆ): ನಿರ್ಮಲಾ, ಮಂಗಳೂರು ವಿ.ವಿ. (34.47.20)-1, ರವಿನಾ ವಿಜಯ್ ಗಾಯಕವಾಡ್, ಸಾವಿತ್ರಿಬಾಯಿ ಫುಲೆ ವಿ.ವಿ ಪುಣೆ (34.48.07)-2, ಅಂಜಲಿ ದೇವಿ, ಲವ್ಲೀ ಪ್ರೊಫೆಷನಲ್ ವಿ.ವಿ. (34.49.54)-3

 -0- 


ಬಾಕ್ಸ್:

ಮಹಿಳೆಯರ ಮೊದಲ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’


ಇಲ್ಲಿನ ಸ್ವರಾಜ್ ಮೈದಾನದಲ್ಲಿ ಸೋಮವಾರ ಆರಂಭಗೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2025-26’ರ ಮೊದಲ ದಿನ ನಡೆದ ಮಹಿಳೆಯರ ವಿಭಾಗದ ಮೊದಲ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ವಿದ್ಯಾರ್ಥಿನಿ ನಿರ್ಮಲಾ ಚಿನ್ನಕ್ಕೆ ಮುತ್ತಿಕ್ಕಿದರು. 

ಆಳ್ವಾಸ್ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ 10ಸಾವಿರ ಮೀಟರ್ಸ್ ಓಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದು, ಮೊದಲಿಗರಾದರು.

Post a Comment

0 Comments