ಮೂಡುಬಿದಿರೆ: ಇಲ್ಲಿನ ಸುರಸಾರವ ಪ್ರೈವೇಟ್ ಲಿಮಿಟೆಡ್ (ಸಂಗೀತ ಶಾಲೆ) ಸಂಸ್ಥೆಯ ವತಿಯಿಂದ ದ್ವಿತೀಯ ವರ್ಷದ 'ಸಂಗೀತೋತ್ಸವ-2026 ಕಾರ್ಯಕ್ರಮದಲ್ಲಿ ಸಂಸ್ಥೆಯ ಅತ್ಯುನ್ನತ ಪುರಸ್ಕಾರವಾದ 'ಸುರಸಾರವ ಕಲಾವಿಭೂಷಣ' ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀಪತಿ ಭಟ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ವಿದ್ವಾನ್ ಯಶವಂತ ಎಂಜಿ ತಿಳಿಸಿದ್ದಾರೆ. ಹಾಗೂ ಸಾಧಕರಾದ ಪೂರ್ಣಿಮಾ (ಉಡುಪಿ), ವೇ.ಮೂ. ಶಶಿಧರ್ ಪುರೋಹಿತ್ (ಕಟಪಾಡಿ), ಆಲ್ವಿನ್ ಅಂದ್ರಾದೆ (ಸಾಸ್ತಾನ) ಮತ್ತು ಸುಶಾಂತ್ ಭಂಡಾರಿ (ಮಂಗಳೂರು) ಅವರಿಗೆ 'ಸುರಸಾರವ ಕಲಾಭೂಷಣ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಉದ್ಯಮಿ ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಭಾಜಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1:45 ರಿಂದ ಶಾರದಾ ಪೂಜೆ, ಗುರುವಂದನೆ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.


0 Comments