ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮ ಪ್ರಶಸ್ತಿ ಪ್ರದಾನ

ಜಾಹೀರಾತು/Advertisment
ಜಾಹೀರಾತು/Advertisment
ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮ ಪ್ರಶಸ್ತಿ ಪ್ರದಾನ
ಮೂಡುಬಿದಿರೆ : ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆದ 23ನೇ ವರ್ಷದ ಹೊನಲು ಬೆಳಕಿನ "ಕೋಟಿ-ಚೆನ್ನಯ"ಕಂಬಳೋತ್ಸವದಲ್ಲಿ ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮದ ಪ್ರಶಸ್ತಿಯನ್ನು ಭಾನುವಾರ ಪ್ರದಾನ ಮಾಡಲಾಯಿತು.
ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್, ಕಾಯ೯ದಶಿ೯ ರಂಜಿತ್ ಪೂಜಾರಿ, ಕುಂಟಾಡಿ ಸುಧೀರ್ ಹೆಗ್ಡೆ, ಪುರಸಭೆಯ ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಂಬಳದ ಮಾಜಿ ಓಟಗಾರ ಕಾಬೆಟ್ಟು ಸುಂದ ಹೆಗ್ಡೆ, ಪ್ರಮುಖರಾದ ಲಕ್ಷ್ಮಣ್ ಪೂಜಾರಿ, ಸುರೇಂದ್ರ ಶೆಟ್ಟಿ,ನಾಗೇಶ್ ಇರುವೈಲು ಉಮೇಶ್ ಹೆಗ್ಡೆ, ರೋಹಣ್ ಅತಿಕಾರಿಬೆಟ್ಟು ಮತ್ತಿತರರು ಈ ಸಂದಭ೯ದಲ್ಲಿದ್ದರು.

Post a Comment

0 Comments