ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾಥಿ೯ ಸಾವು

ಜಾಹೀರಾತು/Advertisment
ಜಾಹೀರಾತು/Advertisment
ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾಥಿ೯ ಸಾವು
ಮೂಡಬಿದಿರೆ: 2025ರ ಅಕ್ಟೋಬರ್ ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ್ದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾಥಿ೯ ಸಾತ್ವಿಕ್ ಕುಲಾಲ್ (21) ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಹಾಗೂ ಜಯಂತಿ ಕುಲಾಲ್ ಅವರ ಪುತ್ರರಾಗಿರುವ ಸಾತ್ವಿಕ್, ಸಿವಿಲ್ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಅಪಘಾತದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Post a Comment

0 Comments