ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಆಟೋ ರಿಕ್ಷಾವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ.
ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡ ವ್ಯಕ್ತಿ. ಅವರು ಶುಕ್ರವಾರ ರಾತ್ರಿ ಮೂಡುಬಿದಿರೆ ಕಡೆಯಿಂದ ಗಾಂಧಿನಗರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಶೇಖರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ಭೀಕರತೆಗೆ ಶಂಕರ್ ಆಚಾರ್ಯ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.


0 Comments