ಮೂಡುಬಿದಿರೆ : ತಾಲೂಕಿನ ಶಿತಾ೯ಡಿಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ) ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆಯ ಸುಮಾರು 250 ಮಕ್ಕಳಿಗೆ ಬರೆಯುವ ಪುಸ್ತಕವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಎಲ್ಲಾ ಉಪಸಮಿತಿ ಮತ್ತು ಗ್ರಾಮ ಸಮಿತಿಗಳ ಸಂಚಾಲಕರು ಪ್ರಬಂಧಕರು ಸಂಯೋಜಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಘದ ಕಟ್ಟಡದಲ್ಲಿ ಪ್ರತಿ ಸೋಮವಾರ ಬೆಳಿಗ್ಗೆ 10:00 ಯಿಂದ ಮಧ್ಯಾಹ್ನ 1 ಗಂಟೆವರೆಗೆ ಜರಗಲಿರುವ ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಿಬಿರವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭ ಆಳ್ವಾಸ್ ಹೋಮಿಯೋಪತಿ ಆಸ್ಪತ್ರೆ ಮತ್ತು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಮತ್ತು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.


0 Comments