ಮೂಡುಬಿದಿರೆ: ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನಕ್ಕೊಳಪಟ್ಟಿರುವ ಶ್ರೀ ದುರ್ಗಾದೇವಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 226-27ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಭವ್ಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಬೇಕು ಹಾಗೂ ನಿರಂತರ ಪರಿಶ್ರಮದ ಮೂಲಕ ಶ್ರೇಷ್ಠತೆಯನ್ನು ಸಾಧಿಸಬೇಕು ಎಂದು ಕರೆ ನೀಡಿ ಸ್ಫೂರ್ತಿ ತುಂಬಿದರು.
ಜ್ಞಾನರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ದೇವಸ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮುನ್ನಡೆಸಿಕೊಟ್ಟರು. ಸಂಸ್ಥೆಯ ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧಾ ಸಾಲಿಯನ್, ಮುಖ್ಯ ಶಿಕ್ಷಕಿ ಸೀಮಾ, ಸಹ ಮುಖ್ಯ ಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು.


0 Comments