ಬೆಳುವಾಯಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಗೆ ಢಿಕ್ಕಿ : ಸವಾರರು ಪ್ರಾಣಾಪಾಯದಿಂದ ಪಾರು
ಮೂಡುಬಿದಿರೆ : ಬೆಳುವಾಯಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್ನ ತಡೆ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದ್ದು ಕಾರಿನ ಮುಂಭಾಗ ರಸ್ತೆ ಸಂಪೂಣ೯ ಜಖಂಗೊಂಡಿದೆ.
ಮಳೆಯ ನೀರಿನಿಂದ ರಸ್ತೆ ಜಾರುವಂತಾಗಿದ್ದರಿಂದ ಕಾರು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಸುರಕ್ಷತಾ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ಬಳಿಕ ರಸ್ತೆಯ ಮೇಲೆ ಇಂಧನ ಹಾಗೂ ನೀರು ಮಿಶ್ರಣಗೊಂಡು ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಕಳೆದ ಎರಡು ವಾರಗಳ ಅವಧಿಯಲ್ಲಿ ಇದೇ ಸ್ಥಳದಲ್ಲಿ ಸಂಭವಿಸಿದ ಮೂರನೇ ಅಪಘಾತ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ನಲ್ಲಿ ಮಳೆ ನೀರು ನಿಲ್ಲುತ್ತಿರುವುದೇ ಈ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ಸಂಬಂಧಪಟ್ಟ ಆಡಳಿತದಿಂದ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ. ಅಪಘಾತ ಸಂಭವಿಸುವ ಸ್ಥಳದಲ್ಲಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಫ್ಲೈಓವರ್ನಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಕಲ್ಪಿಸಿ, ವಾಹನ ಸವಾರರ ಸುರಕ್ಷತೆಗಾಗಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.




0 Comments